ಆಟವಾಡುವಾಗ ವಿದ್ಯುತ್ ಕಂಬದ ವೈರ್ ತಗುಲಿ 6 ವರ್ಷದ ಬಾಲಕ ದುರ್ಮರಣ! | Janata news
ಬಳ್ಳಾರಿ : ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಳ್ಳಾರಿ ತಾಲೂಕಿನ ಹಂದ್ಯಾಳ್ ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ ತಾಲೂಕಿನ ಹಂದ್ಯಾಳ್ ಗ್ರಾಮದ ಮಹಮ್ಮದ್ ಶರೀಫ್ (6) ಮೃತಪಟ್ಟ ದುರ್ದೈವಿ ಬಾಲಕ ಎಂದು ಗುರುತಿಸಲಾಗಿದೆ.
ಆಟವಾಡುತ್ತಿರುವಾಗ ವಿದ್ಯುತ್ ಕಂಬದ ಸರ್ವಿಸ್ ವೈರ್ ತಗುಲಿದ ಪರಿಣಾಮ ಶರೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Ballari