Thu,May09,2024
ಕನ್ನಡ / English

ಕೈ-ಕಾಲು ಕಟ್ಟಿ ವೃದ್ಧನನ್ನು ಬರ್ಬರ ಹತ್ಯೆ ಮಾಡಿದ ಶ್ರೀಗಂಧದ ಮರಗಳ್ಳರು! | Janata news

05 Oct 2020
906

ಚಾಮರಾಜನಗರ : ಶ್ರೀಗಂಧದ ಮರ ಕದ್ದೊಯ್ಯಲು ಬಂದ ದುಷ್ಕರ್ಮಿಗಳು ಮನೆಯ ಮಾಲೀಕನನ್ನೇ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲೇ ನಡೆದಿರುವ ಈ ಘಟನೆಯಿಂದ ಗ್ರಾಮದ ಜನತೆ ಬೆಚ್ಚಿಬಿದ್ದಿದ್ದಾರೆ.

ಗ್ರಾಮದ ಶಿವಬಸಪ್ಪ (80) ಕೊಲೆಗೀಡಾದ ವ್ಯಕ್ತಿಯಾಗಿದ್ದು ಮನೆಯ ಅನತಿ ದೂರದಲ್ಲೇ ಇವರ ಶವ ಪತ್ತೆಯಾಗಿದೆ. ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ, ಟವೆಲ್ ನಿಂದ ಕುತ್ತಿಗೆ ಬಿಗಿದು ಹತ್ಯೆಗೈಯ್ಯಲಾಗಿದೆ.

ಮನೆ ಮುಂದೆ ಬೆಳದು ನಿಂತಿದ್ದ ಶ್ರೀಗಂಧ ಹಾಗು ಮನೆಯ ಮುಂಭಾಗವೇ ಇರುವ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿರುವ ದನಕರುಗಳ ರಕ್ಷಣೆಗೆಂದೆ ಅವರು ಮನೆಯ ಹೊರಗೆ ಮಲಗುತ್ತಿದ್ದರು.

ನಿನ್ನೆ ಮಧ್ಯರಾತ್ರಿ ಶ್ರೀಗಂಧದ ಮರ ಕಡಿದು ಕದ್ದೊಯ್ಯಲು ಬಂದ ಕಳ್ಳರಿಗೆ ಮನೆಯ ಹೊರಗೆ ಮಾಲೀಕ ಶಿವಬಸಪ್ಪ ಮಲಗಿರುವುದು ಕಂಡುಬಂದಿದೆ. ಮನೆಯೊಳಗಿದ್ದವರು ಹೊರಬಾರದಂತೆ ಬಾಗಿಲ ಚಿಲಕ ಹಾಕಿ, ತಕ್ಷಣವೇ ಶಿವಬಸಪ್ಪ ಅವರ ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಅನತಿ ದೂರಕ್ಕೆ ಎತ್ತೊಯ್ದಿದ್ದಾರೆ. ಬಳಿಕ ಕುತ್ತಿಗೆಗೆ ಟವೆಲ್ ಬಿಗಿದು ಹತ್ಯೆ ಮಾಡಿದ್ದಾರೆ.

ಶಿವಬಸಪ್ಪ ಅವರನ್ನು ಹತ್ಯೆಗೈಯ್ದ ನಂತರ ಮನೆ ಬಳಿ ಬಂದ ಖದೀಮರು ಶ್ರೀಗಂಧದ ಮರವನ್ನು ಕೊಯ್ಯಲು ಆರಂಭಿಸಿದ್ದಾರೆ. ಈ ಶಬ್ದ ಕೇಳಿ ಮನೆಯೊಳಗೆ ಮಲಗಿದ್ದ ಶಿವಬಸಪ್ಪ ಅವರ ಪುತ್ರ ಶಿವಕುಮಾರ್ ಮತ್ತಿತರರು ಹೊರಬರಲು ಯತ್ನಿಸಿದ್ದಾರೆ. ಆದರೆ ಹೊರಭಾಗದಿಂದ ಚಿಲಕ ಹಾಕಿದ್ದರಿಂದ ತಕ್ಷಣವೇ ಬರಲು ಸಾಧ್ಯವಾಗದೆ ಚಿಲಕ ಮುರಿದು ಹೊರಬಂದಿದ್ದಾರೆ.

ಹೊರ ಬರುತ್ತಿದ್ದಂತೆ ಮನೆಯ ಮುಂಭಾಗ ಮರ ಕೊಯ್ಯುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ. ಬಳಿಕ ತಮ್ಮ ತಂದೆ ಕಾಣದೆ ಇದ್ದಾಗ ಶಿವಕುಮಾರ್ ಕೂಗಿಕೊಂಡು ಗ್ರಾಮಸ್ಥರೊಡನೆ ಹುಡುಕಾಟ ನಡೆಸಿದಾಗ ಮನೆಯ ಸ್ವಲ್ಪ ದೂರದಲ್ಲಿ ಶಿವಬಸಪ್ಪ ಅವರ ಶವ ಪತ್ತೆಯಾಗಿದೆ.


ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Chamarajanagara

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...