ಉಪಚುನಾವಣೆ: ಆರ್ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಪಡಿಸಿದ ಸಿದ್ದರಾಮಯ್ಯ | Janata news
ಮೈಸೂರು : ರಾಜ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಪತ್ನಿ ಕುಸುಮಾ ಸ್ಪರ್ಧೆ ಮಾಡಲಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಾವು ಹೈಕಮಾಂಡ್ಗೆ ಕುಸುಮಾ ಹೆಸರು ಕಳುಹಿಸಿದ್ದೇವೆ. ಅವರೇ ಅಂತಿಮವಾಗಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ಅಥವಾ ನಾಳೆ ಅಭ್ಯರ್ಥಿ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎಂದು ತಿಳಿಸಿದರು.
ಕುಸುಮಾ ಸ್ಪರ್ಧೆಗೆ ಯಾರಾದರೂ ವಿರೋಧ ವ್ಯಕ್ತಪಡಿಸಲಿ. ನಮ್ಮ ಪಕ್ಷದ ಅಭ್ಯರ್ಥಿಗೆ ವೋಟು ಕೇಳೋದು ನಮ್ಮ ಕರ್ತವ್ಯ. ವಿರೋಧ ಪಡಿಸುವವರನ್ನ ನಾವು ಬೇಡ ಅನ್ನೋಕೆ ಆಗೋಲ್ಲ. ಆರ್ಆರ್ ನಗರ ಹಾಗೂ ಶಿರಾ ಎರಡು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿ ಪಕ್ಷದ ಆಂತರಿಕ ವಿಚಾರವನ್ನು ನಾನು ಮಾತನಾಡೋಲ್ಲ ಎಂದರು.