ಕೊಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡುಹಾರಿಸಿ ಬಂಧನ! | Janata news
ಕಲಬುರಗಿ : ಕೊಲೆ ಪ್ರಕರಣದ ಸಂಬಂಧಿಸಿದ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.
ಈ ಘಟನೆ ನಡೆದಿರುವುದು ಜಿಲ್ಲೆಯ ಹೊರವಲಯದ ಸುಲ್ತಾನಪುರ ಬಳಿ. ಮೆಹಬೂಬ್ ನಗರ ನಿವಾಸಿ ಮುಬಿನ್ ಅಲಿಯಾಸ್ ಅಬ್ದುಲ್ ರೆಹಮಾನ್ (25) ಕೊಲೆ ಆರೋಪಿ.
ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು.
ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ.
ಈ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸೋಮಲಿಂಗ ಕಿರದಳ್ಳಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.