ಕುಮಾರಸ್ವಾಮಿ ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡ್ತಾರೆ! | Janata news
ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಾತಿ ರಾಜಕಾರಣ ಮಾಡಲು ಹೊರಟಿದೆ. ಡಿಕೆ ಶಿವಕುಮಾರ್ಗೆ ಜಾತಿ ರಾಜಕಾರಣ ಮಾಡುವಂತೆ ಹೇಳಿಕೊಟ್ಟವರು ಯಾರು ಎಂಬುದು ಗೊತ್ತಿದೆ ಎಂಬ ಎಚ್ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಜಾತಿ ಕಾರ್ಡ್ ಎಲ್ಲ ನಡೆಯಲ್ಲ. ಅಲ್ಲದೇ ಯಾವ ಜಾತಿಯೂ ಒಬ್ಬರ ಹಿಂದೆ ಹೋಗಲ್ಲ. ಒಕ್ಕಲಿಗರೆಲ್ಲಾ ಕುಮಾರಸ್ವಾಮಿ ಜೊತೆ ಹೋಗಲ್ಲ ಎಂದು ತಿಳಿಸಿದರು.
ಕುಮಾರಸ್ವಾಮಿ ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡ್ತಾರೆ, ಇದು ವರ್ಕೌಟ್ ಆಗಲ್ಲ. ಯಾವ ಸಮುದಾಯವೂ ಒಬ್ಬರ ಹಿಂದೇಯೇ ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮಾತನಾಡಿದ ಅವರು, ಒಕ್ಕಲಿಗರು ಕುಮಾರಸ್ವಾಮಿ ಇಲ್ಲವೇ ಇನ್ನೊಬ್ಬರ ಜೊತೆಗೆ ಹೋಗಲ್ಲ. ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ರನ್ನು ಯಾಕೆ ಸೋಲಿಸಿದ್ರು, ತುಮಕೂರಿನಲ್ಲಿ ಎಚ್.ಡಿ.ದೇವೇಗೌಡರನ್ನು ಯಾಕೆ ಸೋಲಿಸಿದ್ರು. ಈ ಜಾತಿ ಕಾರ್ಡ್ ವರ್ಕೌಟ್ ಆಗಲ್ಲ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡದಿರುವು ಕುರಿತು ಟೀಕಿಸಿದ ಅವರು, ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿ ಅಭ್ಯರ್ಥಿಗಳನ್ನು ಒಪ್ಪಲು ಇಷ್ಟ ಸ್ಥಳೀಯ ಜನರಿಗೆ ಇಷ್ಟ ಇಲ್ಲ. ಹಾಗಾಗಿ ಅವರ ಪಕ್ಷದಲ್ಲಿ ಮೂಲ ಮತ್ತು ವಲಸಿಗರ ಸಂಘರ್ಷ ನಡೆಯುತ್ತಿದೆ. ಇನ್ನು ಜೆಡಿಎಸ್ನಲ್ಲಿ ಅಭ್ಯರ್ಥಿಯೇ ಇಲ್ಲ ಎಂದು ಇದೇ ವೇಳೆ ಟೀಕಿಸಿದರು.