ಕುಡಿದು ಗಲಾಟೆ ಮಾಡುತ್ತಿದ್ದ ಎಂದು ಬೇಸತ್ತು ಅಣ್ಣನ ಬರ್ಬರ ಹತ್ಯೆ ಮಾಡಿದ ತಮ್ಮ | Janata news
ಹಾವೇರಿ : ಅಣ್ಣನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ನಾಗರಾಜ ಗೊರವರ (22) ತಮ್ಮನಿಂದ ಕೊಲೆಯಾದ ದುರ್ದೈವಿ. ದಿಳ್ಳೆಪ್ಪ ಗೊರವರ ಸಹೋದರನ್ನನ್ನೆ ಕೊಲೆ ಮಾಡಿದ ವ್ಯಕ್ತಿ.
ಪ್ರತಿ ದಿನ ಕುಡಿದು ಮನೆಯಲ್ಲಿ ನಾಗರಾಜ ಗೊರವರ ಗಲಾಟೆ ಮಾಡುತ್ತಿದ್ದ. ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ಇದರಿಂದ ಕುಟುಂಬದ ಸದಸ್ಯರು ರೋಸಿ ಹೋಗಿದ್ದರು.
ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ ತಮ್ಮ ದಿಳ್ಳೆಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
English summary :Murder in Haveri