ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್! | Janata news
ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಗಂಗಾವತಿ ತಾಲೂಕಿನ ಮಲ್ಲಾಪೂರ ವಾಣೀಭದ್ರೇಶ್ವರ ಬೆಟ್ಟದಲ್ಲಿ ಜೇಮ್ಸ್ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಕೋವಿಡ್ ಜನಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ದಿನ ನಿತ್ಯದ ಕೆಲಸಗಳ ಜತೆಗೆ ಸಾರ್ವಜನಿಕರು ಜಾಗೃತಿಯಿಂದ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಬಳಕೆ ಸಾಮಾಜಿಕ ಅಂತರ ಕಾಪಾಡಬೇಕು. ಹೆಚ್ಚು ಜನ ಗುಂಪು ಕೂಡಬಾರದು ಕೊರೊನಾ ರೋಗದ ಬಗ್ಗೆ ನಿರ್ಲಕ್ಷ್ಯ ಮಾಡದೇ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
RELATED TOPICS:
English summary :Power Star Puneet Rajkumar