ಮಾರಮ್ಮ ದೇಗುಲದ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥ! | Janata news
ಮಂಡ್ಯ : ಮಾರಮ್ಮನ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿನ ಮಾರಮ್ಮನ ದೇವಾಲಯದಲ್ಲಿ ಅಕ್ಟೋಬರ್ 27ರ ರಾತ್ರಿ ಪ್ರಸಾದದ ರೂಪದಲ್ಲಿ ಪುಳಿಯೋಗರೆಯನ್ನು ದೇವಸ್ಥಾನಕ್ಕೆ ಬಂದಿದ್ದ ಭಕ್ತಾದಿಗಳಿಗೆ ಹಂಚಲಾಗಿತ್ತು.
ಸುಮಾರು 200 ಮಂದಿಯ ಪೈಕಿ 100 ಮಂದಿ ಪುಳಿಯೋಗರೆ ಸೇವಿಸಿದ್ದರು. ಇಂದು ಬೆಳಗ್ಗೆ ಸುಮಾರು 70 ಮಂದಿಯಲ್ಲಿ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ.
ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸ್ವಸ್ಥರಿಗೆ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹಲಗೂರು ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
English summary :Mandya