ಜಮ್ಮು ಮತ್ತು ಕಾಶ್ಮೀರ 3 ಬಿಜೆಪಿ ಕಾರ್ಯಕರ್ತರ ಹತ್ಯೆ : ಖಂಡಿಸಿದ ಪ್ರಧಾನಿ ಮೋದಿ | Janata news
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿನ 3 ಬಿಜೆಪಿ ಕಾರ್ಯಕರ್ತರನ್ನು ನಿನ್ನೆ ಗುರುವಾರ ಸಂಜೆ ಗುಂಡಿಕ್ಕಿ ಕೊಂದ ಭಯೋತ್ಪಾದಕ ದುಷ್ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಯವರು ಖಂಡಿಸಿದ್ದಾರೆ.
ನಮ್ಮ 3 ಯುವ ಕಾರ್ಯಕರ್ತರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಅವರು ಜೆ & ಕೆನಲ್ಲಿ ಅತ್ಯುತ್ತಮ ಕೆಲಸ ಮಾಡುವ ಪ್ರಕಾಶಮಾನವಾದ ಯುವಕರಾಗಿದ್ದರು. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬಗಳೊಂದಿಗೆ ಇವೆ. ಅವರ ಆತ್ಮಗಳು ಶಾಂತಿಯಿಂದ ವಿಶ್ರಾಂತಿ ಪಡೆಯಲಿ.
ಕುಲಗಂ ಜಿಲ್ಲೆಯಲ್ಲಿ ನಿನ್ನೆ ಗುರುವಾರ ಸಂಜೆ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಮೂರು ಬಿಜೆಪಿ ಸದಸ್ಯರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಂನ ವೈ ಕೆ ಪೊರಾ ಗ್ರಾಮದಲ್ಲಿ ಬಿಜೆಪಿಯ ಯುವ ವಿಭಾಗದ ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಿಡಾ ಹುಸೇನ್ ಯಾಟೂ ಮತ್ತು ಉಮರ್ ರಂಜಾನ್ ಹಜಮ್ ಮತ್ತು ಉಮರ್ ರಶೀದ್ ಬೀಗ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ, ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯಾಟೂ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ಮೃತಪಟ್ಟರು.
ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಈ ಕುರಿತು ಹೇಳಿಕೆ ನೀಡಿದ್ದು, ಬಿಜೆಪಿ ನಾಯಕರಾದ ಫಿಡಾ ಹುಸೇನ್ ಇಟೂ, ಉಮರ್ ರಶೀದ್ ಬೀಘ್, ಉಮರ್ ಹನನ್ ಅವರ ಮೇಲಿನ ಈ ಅನಾಗರಿಕ ಭಯೋತ್ಪಾದಕ ದಾಳಿಯನ್ನು ಜೆ & ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ದುಷ್ಕೃತ್ಯದ ಕಾರಣಕರ್ತರು ಉಳಿಸಬಾರದು, ಕಟುವಾಗಿ ಹೇಳಿದೆ.