ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು! | Janata news
ಬಾಗಲಕೋಟೆ : ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ.
ಬಸವರಾಜ ಮಹಾಂತಯ್ಯ ಹಿರೇಮಠ (12) ಮತ್ತು ಪ್ರವೀಣ ರೋಣದ (12) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರು. ಈ ಇಬ್ಬರು ಬಾಲಕರು ಬಾಚಿನಗುಡ್ಡ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಅ.29ರ ಗುರುವಾರ ಸಂಜೆ ನದಿಗೆ ಈಜಲು ಹೋಗಿದ್ದ ಈ ಬಾಲಕರು ಮನೆಗೆ ವಾಪಸ್ ಬಂದಿರಲಿಲ್ಲ.
ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :Bagalkote