ಕಬ್ಬಿನ ಗದ್ದೆಯಲ್ಲಿ ಮುದ್ದಾದ ಮೂರು ಚಿರತೆ ಮರಿಗಳು ಪ್ರತ್ಯಕ್ಷ: ಮರಿಗಳ ಜೊತೆ ಗ್ರಾಮಸ್ಥರ ಸೆಲ್ಫಿ! | Janata news
ಮಂಡ್ಯ : ಕಬ್ಬಿನ ಗದ್ದೆಯಲ್ಲಿ ಮುದ್ದು ಮುದ್ದಾದ ಮೂರು ಚಿರತೆ ಮರಿಗಳು ಸಿಕ್ಕಿದ್ದು, ಗ್ರಾಮಸ್ಥರು ಅವನ್ನು ನೋಡಲು ಮುಗಿಬಿದ್ದ ಘಟನೆ ಮಂಡ್ಯದ ಬಿ.ಹೊಸೂರು ಕಾಲೋನಿಯ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿನಯ್ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಮರಿ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಜಮೀನಿಗೆ ಹೋದಾಗ ಚಿರತೆ ಮರಿಗಳು ಕಂಡು ಬಂದಿವೆ.
ಇವನ್ನು ನೋಡಲು ಜನರು ಮುಗಿಬಿದ್ದಿದ್ದು, ಚಿರತೆ ಮರಿಗಳನ್ನು ಎತ್ತಿಕೊಂಡು ಸೆಲ್ಫೀ ತೆಗೆದುಕೊಳ್ಳಲು ಪೈಪೋಟಿಯನ್ನೂ ನಡೆಸಿದ್ದಾರೆ.
ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ ಗ್ರಾಮಸ್ಥರು ಚಿರತೆ ಮರಿಗಳನ್ನು ರಕ್ಷಿಸಿ ವಶಕ್ಕೆ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಚಿರತೆ ಮರಿಗಳನ್ನು ಅರಣ್ಯಕ್ಕೆ ಬಿಡಲು ಕೊಂಡೊಯ್ದಿದ್ದಾರೆ. ತಾಯಿ ಚಿರತೆಯಿಂದ ಯಾರಿಗೂ ತೊಂದರೆ ಆಗಬಾರದೆಂದು ಅದೇ ಜಮೀನಿನಲ್ಲಿ ಸೆರೆಗೆ ಬೋನ್ ಇಟ್ಟಿದ್ದಾರೆ.