ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿ: ಮಹಾದೇವ ಭೈರಗೊಂಡ ಸ್ಥಿತಿ ಗಂಭೀರ! | Janata news
ವಿಜಯಪುರ : ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದಾಗಿದ್ದು, ರೌಡಿಶೀಟರ್ ಮಹಾದೇವ ಸಾಹುಕಾರ ಭೈರಗೊಂಡ ಗಂಭೀರ ಗಾಯಗೊಂಡಿದ್ದಾರೆ.
ವಿಜಯಪುರ ಹೊರವಲಯದ ಭೂತನಾಳ ತಾಂಡಾ ಬಳಿ ಸೋಮವಾರ ಅಪರಿಚಿತರ ತಂಡ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ.
ಗುಂಡಿನ ದಾಳಿಯಿಂದ ಮಹಾದೇವ ಭೈರಗೊಂಡ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದ್ದರೆ, ಮತ್ತೋರ್ವ ವ್ಯಕ್ತಿ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮಹಾದೇವ ಸಾಹುಕಾರ ಸಂಚರಿಸುತ್ತಿದ್ದ ಕಾರ್ಗೆ ವಿಜಯಪುರ ಜಿಲ್ಲೆಯ ಅರಕೇರಿ ತಾಂಡಾ ಬಳಿ ಟಿಪ್ಪರ್ ಒಂದು ಢಿಕ್ಕಿ ಹೊಡೆದಿದೆ. ಈ ವೇಳೆ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.
ಅಪರಿಚಿತರ ಗುಂಡಿನ ದಾಳಿಯಿಂದಾಗಿ ಮಹಾದೇವ ಭೈರಗೊಂಡ ಅವರು ಗಾಯಗೊಂಡು, ಅವರ ಸಹಚರ ಬಾಬುರಾಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪರಿಚಿತರ ಗುಂಡಿನ ದಾಳಿಯಿಂದಾಗಿ ಮಹಾದೇವ ಭೈರಗೊಂಡನಿಗೆ ಮೂರು ಗುಂಡು ದೇಹದ ಒಳಹೊಕ್ಕಿದ್ದು, ಮಹಾದೇವ ಭೈರಗೊಂಡ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.