ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಇಬ್ಬರ ದುರ್ಮರಣ | Janata news
ಕಾರವಾರ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಮಂಗಳವಾರ ಮುಂಜಾವ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ ಸಿ.ಆರ್.(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕ್ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೋಣೆ ನಾಲೆಗೆ ಬಿದ್ದಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Karwar