ಅರಿಶಿನ ಹಲವು ರೋಗಗಳಿಗೆ ಉಪಶಮನ ನೀಡುವ ಅದ್ಭುತ ಔಷಧಿ -
Bangalore : - ಅರಿಶಿಣಕ್ಕೆ ಸನಾತನ ಸಂಪ್ರದಾಯದಲ್ಲಿ ಬಹಳ ಮಹತ್ವವಿದೆ. ಮಂಗಳ ಕಾರ್ಯಗಳಲ್ಲಿ ಅರಿಶಿಣವೇ ಪ್ರಧಾನ. ವಿವಾಹಗಳಲ್ಲಿ ಇದರ ಉಪಯೋಗಕ್ಕೆ ಬಹಳ ಮಹತ್ವವಿದೆ.
- ಇದು ಕೇವಲ ಅಡುಗೆಯ ರುಚಿ ಹೆಚ್ಚಿಸುವ, ಅಥವಾ ಅಡುಗೆಗೆ ಹಳದಿ ಬಣ್ಣದ ರಂಗು ನೀಡುವ ಮಸಾಲೆ ಮಾತ್ರವಲ್ಲ,
- ಅರಿಶಿನದಲ್ಲಿ ನಾನಾ ವಿಧವಾದ ರೋಗಗಳನ್ನು ಗುಣಪಡಿಸುವ ಶಕ್ತಿ ಅಡಗಿದೆ. ಮಾರುಕಟ್ಟೆಯಲ್ಲಿ ಸಿಗುವ ಅರಿಶಿಣಕ್ಕಿಂತ ಅರಿಶಿನ ಕೊಂಬುಗಳನ್ನು ಕುಟ್ಟಿ ನುಣ್ಣಗೆ ಪುಡಿ ಮಾಡಿ ಬಳಸುವುದು ಸರ್ವ ಶ್ರೇಷ್ಠ.
- ಅಂದರೆ ಹಳದಿಯು ಜ್ಞಾನ ಎಂದರ್ಥ. ವೈಜ್ಞಾನಿಕವಾಗಿಯೂ, ವೈದ್ಯಕೀಯವಾಗಿಯೂ ಮಹತ್ವ ಪಡೆದಿದೆ. ಅಂದರೆ ಒಟ್ಟಿನಲ್ಲಿ ಮಾನಸಿಕ ಉದ್ವೇಗಗಳನ್ನು ನಿಂತ್ರಿಸುತ್ತದೆ. ಅರಿಶಿಣಕ್ಕೆ ಸೋಂಕು ನಿವಾರಕ ಶಕ್ತಿಗಳಿವೆ.
- ಇದಕ್ಕೆ ಹಳದಿ ಬಣ್ಣ ಬರಲು ಕಾರಣವಾದ ಕುರ್ಕುಮಿನ್ ಎಂಬ ಪೋಷಕಾಂಶಕ್ಕೆ ಕ್ಯಾನ್ಸರ್ ನಿರೋಧಕ ಗುಣವಿದೆ ಹಾಗೂ ಕ್ಯಾನ್ಸರ್ ಉಂಟುಮಾಡುವ ಕಣಗಳನ್ನು ವಿಕರ್ಷಿಸುವ ಗುಣ ಹೊಂದಿದೆ.
- ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ. ಅರಿಶಿನ ಬೆರೆಸಿದ ಹಾಲನ್ನು ಸಾಂಪ್ರದಾಯಿಕ ಮನೆ ಮದ್ದಾಗಿ ಬಳಸಲಾಗುತ್ತದೆ.
ಸ್ನಾಯುಗಳಲ್ಲಿ ಊತವಿದ್ದರೆ ಅದನ್ನು ಕಡಿಮೆ ಮಾಡುತ್ತದೆ. ಸ್ನಾಯು ಮತ್ತು ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ. ಬೆನ್ನು ಮೂಳೆ ಹಾಗೂ ದೇಹದ ಕೀಲುಗಳಿಗೆ ಬಲ ತುಂಬುತ್ತದೆ.
ಅರಿಶಿನ ಬೆರೆಸಿದ ಹಾಲು ಕುಡಿದ್ರೆ ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಅಲ್ಸರ್, ಅತಿಸಾರ ಮತ್ತು ಅಜೀರ್ಣದಂತಹ ಸಮಸ್ಯೆಯಿಂದ ದೂರವಿರಬಹುದು.
ಅರಿಶಿನ ತನ್ನ ಉರಿಯೂತ ನಿವಾರಕ ಗುಣಕ್ಕೆ ಖ್ಯಾತಿ ಪಡೆದಿದೆ. ನಿಮ್ಮ ನಿತ್ಯದ ಆಹಾರದಲ್ಲಿ ಅರಿಶಿನವನ್ನು ಬೆರೆಸಿ ಸೇವಿಸುವ ಮೂಲಕ ದೇಹದ ವಿವಿಧ ಭಾಗಗಳಲ್ಲಿ ಎದುರಾಗುವ ಉರಿಯೂತವನ್ನು
- ಮಜ್ಜಿಗೆಯೊಂದಿಗೆ ಅರಿಶಿನ ಪುಡಿಯನ್ನು ಬೆರೆಸಿ ಕುಡಿಯುವುದರಿಂದ ನೂಲವ್ಯಾಧಿ, ರಕ್ತಭೇದಿ, ಅತಿಸಾರ, ಸಂಧಿವಾತ , ಚರ್ಮರೋಗಗಳು ನಿಯಂತ್ರಣಕ್ಕೆ ಬರುವವು.
- ಅರಿಶಿನ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ಅಂಗಾಂಗಗಳಿಗೆ ಹಚ್ಚಿ ಸ್ನಾನ ಮಾಡಿದರೆ ಚರ್ಮರೋಗಗಳು ನಿವಾರಣೆಯಾಗುವುದು.
- ಇದರಲ್ಲಿರುವ ಅದ್ಭುತವಾದ ಆಂಟಿಬಯೋಟಿಕ್ ಅಂಶಗಳು ಅರಿಶಿನದಲ್ಲಿರುವ ಕರ್ಕುಮಿನ್ ಎಂಬ ಅಂಶವು ತನ್ನ ಉರಿಯೂತ ನಿವಾರಕ ಹಾಗು ಆಂಟಿಬ್ಯಾಕ್ಟೀರಿಯಲ್ ಗುಣಗಳಿಗೆ ಹೆಸರುವಾಸಿಯಾಗಿದೆ.
- ಅರಿಶಿನವನ್ನು ತ್ವಚೆಯ ಮೇಲೆ ಲೇಪಿಸಿಕೊಂಡರೆ ಮೊಡವೆಗಳು ಹಾಗು ಗುಳ್ಳೆಗಳು ಹಾಗು ಗುಳ್ಳೆಗಳು ಸಹ ನಿವಾರಣೆಯಾಗುತ್ತವೆ.
ಅರಿಶಿನ ಮತ್ತು ಶ್ರೀಗಂಧವನ್ನು ಹಾಲಿನ ಕೆನೆಯೊಂದಿಗೆ ಮಿಶ್ರಮಾಡಿ ಹಚ್ಚಿಕೊಂಡರೆ ಮೊಡವೆಗಳು ಮಾಗುತ್ತವೆ. ಚರ್ಮದ ಕಾಂತಿ ಹೆಚ್ಚುತ್ತದೆ.
ಸಾಮಾನ್ಯ ತ್ವಚೆಗೆ ಯೋಗರ್ಟ್ ಹಾಗು ಅರಿಶಿನವನ್ನು ಬಳಸುವುದು ಒಳ್ಳೆಯದು.