ಪತ್ನಿಯ ಜೀವ ತೆಗೆದ ಪತಿರಾಯ, ಯಾಕೆ ಗೊತ್ತಾ? ಜೀವನಾಂಶ ಕೇಳಿದ್ದಕ್ಕೆ ! | Janata news
ಹಾಸನ : ಜಿಲ್ಲೆಯ ಚೀರನಹಳ್ಳಿ ಬಳಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ಹಾಗೂ ಪ್ರೇಯಸಿಯನ್ನು ಬಂಧಿಸಿದ್ದಾರೆ.
ಸುಷ್ಮಿತ ಕೊಲೆಯಾದ ದುರ್ದೈವಿ. ನಾಗರಾಜ್ (28) ಬಂಧಿತ ಆರೋಪಿ ಪತಿ. ಕೊಲೆಗೆ ಸಹಕರಿಸಿದ ಪ್ರೇಯಸಿ ಶೈಲಾ (27) ಮತ್ತು ಮೋಹನ್ (24) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ-
ನವೆಂಬರ್ 11ರಂದು ಚೀರನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದ ವೇಳೆ ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ನಿವಾಸಿ ಸುಶ್ಮಿತಾ(26) ಎಂದು ತಿಳಿದುಬಂದಿತ್ತು.
ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೆಲಗೂರಿನಲ್ಲಿ ಸುಷ್ಮಿತಾಳನ್ನು ಕೊಲೆ ಮಾಡಿದ್ದ ನಾಗರಾಜ್, ಪತ್ನಿಯ ಶವವನ್ನು ಹಾಸನದ ದುದ್ದ ಚೀರನಹಳ್ಳಿ ಕೆರೆಗೆ ತಂದು ಎಸೆದಿದ್ದ.
ಶೈಲಾಳ ಜತೆಗಿನ ಅಕ್ರಮ ಸಂಬಂಧವೇ ಪತ್ನಿ ಸುಷ್ಮಿತಾ ಕೊಲೆಗೆ ಕಾರಣ ಎನ್ನಲಾಗಿದೆ.
6 ವರ್ಷದ ಹಿಂದೆ ಸುಶ್ಮಿತಾ ಹಾಗೂ ನಾಗರಾಜ್ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಆದರೆ ನಾಗರಾಜ್, ಇತ್ತೀಚೆಗೆ ಶೈಲಾ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಸುಶ್ಮಿತಾ ಆತನಿಂದ ದೂರವಾಗಿದ್ದಳು. ಇದಲ್ಲದೆ, ಗಂಡನಿಂದ ಜೀವನಾಂಶ ಪಡೆಯಲು ಕೇಸ್ ಸಹ ಹಾಕಿದ್ದಳು.
ನಾಗರಾಜ್ ನಿನ್ನ ಜೊತೆ ಕೇಸ್ ಬಗ್ಗೆ ಮಾತನಾಡಬೇಕೆಂದು ನೆಪವೊಡ್ಡಿ ಅಕ್ಟೋಬರ್ 29ರಂದು ಪತ್ನಿಯನ್ನು ಬೆಲಗೂರಿಗೆ ಕರೆಸಿಕೊಂಡಿದ್ದ. ಅಲ್ಲಿ ತನ್ನ ಪ್ರೇಯಸಿ ಶೈಲಾ ಜೊತೆ ಸೇರಿ ನಾಗರಾಜ್ ಸುಶ್ಮಿತಾಳನ್ನು ಕೊಂದು, ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಹೊಸದುರ್ಗದಲ್ಲಿ ಕೊಲೆ ಮಾಡಿ ಹಾಸನದ ಅರಸೀಕೆರೆಯ ದುದ್ದ ಗ್ರಾಮದ ಬಳಿಯಿರುವ ಕೆರೆಗೆ ಶವ ಹಾಕಿದ್ದ.