ಮಾದಕ ದ್ರವ್ಯದಿಂದ ಸರ್ಕಾರ ನಡೆಸುತ್ತಿದ್ದರು ಹೇಳಿಕೆ: ನಳಿನ್ ಕುಮಾರ್ಗೆ ಏನೋ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು: ಡಿಕೆಶಿ | Janata news
ಕಾರವಾರ: : ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಶಿರಸಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ, ನಳೀನ್ ಕುಮಾರ್ ಕಟೀಲ್ಗೆ ಏನೋ ಹೆಚ್ಚು ಕಡಿಮೆಯಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ನಾನು ಕೂಡ ಅದೇ ಸರ್ಕಾರದಲ್ಲಿದ್ದೆ. ಸರ್ಕಾರವನ್ನು ಮಾದಕ ದ್ರವ್ಯದಿಂದ ನಡೆಸುತ್ತಿದ್ದಾರೆ ಎಂದಾದರೆ ಇವರು ಎಫ್ಐಆರ್ ಏಕೆ ಮಾಡಿಲ್ಲ. ಯಾವುದೋ ಸಣ್ಣಪುಟ್ಟ ನಟಿಯರನ್ನು ಹಿಡಿದಿದ್ದಾರಷ್ಟೆ ಎಂದರು.
ಸಿದ್ದರಾಮಯ್ಯ ಅವರು 5 ವರ್ಷ ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬುದು ಸತ್ಯವೇ ಆಗಿದ್ದರೆ, ಎಫ್ಐಆರ್ ದಾಖಲಿಸಲಿಲ್ಲವೇಕೆ? ನಳಿನ್ ಕುಮಾರ್ ಕಟೀಲ್ ಅವರಿಗೆ ಏನೋ ಹೆಚ್ಚು ಕಮ್ಮಿ ಆಗಿದೆ. ಆಸ್ಪತ್ರೆಗೆ ಸೇರಿಸಬೇಕು. ಅವರ ಹೇಳಿಕೆ ಅವರಿಗೇ ಅರ್ಥವಾಗಬೇಕು ಎಂದು ಹೇಳಿದ್ದಾರೆ.
ಯಾರೋ ಸಣ್ಣ ನಟಿಯರನ್ನು ಜೈಲಿಗೆ ಹಾಕಿದ್ದಾರೆ. ನಾನು ಸರ್ಕಾರದಲ್ಲಿ ಇದ್ದವನೇ. ಅವರು ಎಫ್ಐಆರ್ ಹಾಕಲಿ ನೋಡೋ. ನಮ್ಮಲ್ಲಿ ಇದ್ದ ಸಾಕಷ್ಟು ನಾಯಕರು ಅವರ ಸರ್ಕಾರದಲ್ಲಿ ಇದ್ದಾರಲ್ಲವೇ... ಅವರ ಮೇಲೂ ದೂರು ದಾಖಲು ಮಾಡಲಿ ಎಂದು ಸವಾಲೆಸೆದಿದ್ದಾರೆ.
ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ.ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಬಂದ ಹಾಗೆ ಆಗುತ್ತದೆ ಎಂದರು.