ನಟಿ ಉಮಾಶ್ರೀ ಕಾರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೆ ವೈದ್ಯೆ ಸಾವು! | Janata news
ಹುಬ್ಬಳ್ಳಿ : ನವಂಬರ್ 20ರಂದು ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ಚಿತ್ರನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಮತ್ತು ಮತ್ತೊಂದು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ವೈದ್ಯೆ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಶೋಭಾ ಕಟ್ಟಿ ಹಾಗೂ ಚಾಲಕ ಸಂದೀಪ ವಿಭೂತಿಮಠ ಎಂಬುವವರು ಸಾವಿಗೀಡಾಗಿದ್ದರು. ಇದೇ ಕಾರಿನಲ್ಲಿದ್ದ ಡಾ.ಸ್ಮಿತಾ ಕಟ್ಟಿ ತೀವ್ರ ಗಾಯಗೊಂಡಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಡಾ. ಸ್ಮಿತಾ ಕಟ್ಟಿ ಚಿಕಿತ್ಸೆ ಫಲಿಸದೇ ಇಂದು ಸಾವಿನ್ನಪ್ಪಿದ್ದಾರೆ. ಈ ಮೂಲಕ ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿನಲ್ಲಿದ್ದ ಮೂವರು ಸಾವಿಗೀಡಾದಂತಾಗಿದೆ.
ಇನ್ನು ಉಮಾಶ್ರೀ ಕಾರು ಚಾಲಕ ಶಿವಕುಮಾರ ಕೂಡ ಗಾಯಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಪ್ರಕರಣ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.