₹2 ಲಕ್ಷ ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಎಸಿಬಿ ಬಲೆಗೆ! | Janata news
ಚಿತ್ರದುರ್ಗ : ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮೊಳಕಾಲ್ಮೂರಿನ ತಹಶಿಲ್ದಾರ್ ಮಲ್ಲಿಕಾರ್ಜುನ ಹಾಗೂ ಆರ್ ಐ ಉಮೇಶ್ ಇಬ್ಬರನ್ನು ಎಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ ಕಂದಾಯ ಅಧಿಕಾರಿ ಆರ್.ಐ. ಉಮೇಶ್ ರಸ್ತೆ ನಿರ್ಮಾಣ ಗುತ್ತಿಗೆದಾರ ಪ್ರೀತಮ್ ಬಳಿ ₹2 ಲಕ್ಷ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದರು ಎಂದು ತಿಳಿದುಬಂದಿದೆ. ACB ಎಸ್.ಪಿ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಯಿತು.
RELATED TOPICS:
English summary :chitradurga