ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ನೇಣಿಗೆ ಶರಣಾದ ತಾಯಿ! | Janata news
ಮಂಡ್ಯ : ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ನೇಣಿಗೆ ಶರಣಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ತಾಯಿಯನ್ನು ನಿವೇದಿತಾ (26) ಎಮದು ಗುರುತಿಸಲಾಗಿದೆ. ಮಕ್ಕಳಾದ ಗಾನವಿ(6) ಹಾಗೂ ಉಲ್ಲಾಸ್(4) ನನ್ನು ಮೊದಲು ನೇಣಿಗೆ ಹಾಕಿ ಸಾಯಿಸಿದ್ದಾಳೆ. ನಂತನ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.
7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವವನನ್ನು ನಿವೇದಿತಾ ವಿವಾಹವಾಗಿದ್ದರು. ಗಂಡ ಹೆಂಡತಿ ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ ಎನ್ನಲಾಗಿದೆ. ಆದರೆ ನಿವೇದಿತಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಆದರೆ ಮಕ್ಕಳನ್ನೂ ಕೊಂದು ನಿವೇದಿತಾ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.