ಡಿಸೆಂಬರ್ನಲ್ಲಿ ನಡೆಯುವ ಗ್ರಾಮ ಪಂ. ಚುನಾವಣೆಗೆ ಬಹಿಷ್ಕಾರ ಹಾಕಿದ 4 ಗ್ರಾಮದ ಜನರು, ಕಾರಣವೇನು? | Janata news
ಚಿಕ್ಕಮಗಳೂರು : ಜಿಲ್ಲೆಯ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಗ್ರಾ.ಪಂ. ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು ಈ ಬಗ್ಗೆ ಬ್ಯಾನರ್ ಹಾಕಿದ್ದಾರೆ.
ಆನ್ಲೈನ್ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ.
ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯದ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡವಂತಿ, ಹುಯಿಗೆರೆ, ದೇವದಾನ, ಬಿದರೆ ಗ್ರಾ.ಪಂಗಳಲ್ಲಿ ಯಾರೂ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಬಹಿಷ್ಕಾರ ಹಾಕಲಾಗಿದೆ.
ಜನರು ಸಮಸ್ಯೆಯಲ್ಲಿದ್ದರು ಸರಕಾರ ತಿರುಗಿ ನೋಡಿತ್ತಿಲ್ಲ ಎನ್ನುವ ಕಾರಣಕ್ಕೆ ಚುನಾವಣೆ ಬಹಿಷ್ಕರಿಸಿ ತಕ್ಕ ಪಾಠ ಕಲಿಸಲು ಇದೀಗ ಸಾರ್ವಜನಿಕರು ಮುಂದಾಗಿದ್ದಾರೆ.