ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ! | Janata news
ರಾಯಚೂರು : ಕೃಷ್ಣಾ ನದಿಗೆ ನೀರು ಕುಡಿಯಲು ಹೋದ ಬಾಲಕನನ್ನು ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.
ಬುಧವಾರದಂದು 12 ವರ್ಷದ ಬಾಲಕ ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಬಂದಿದ್ದ. ಮಧ್ಯಾಹ್ನ ಉಟ ಮಾಡಿ, ಅವನಿಗೆ ಬಾಯಾರಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣ ನದಿಯಲ್ಲಿ ನೀರು ಕುಡಿಯಲು ಇಳಿದಿದ್ದ.
ಈ ವೇಳೆ ಮೊಸಳೆ ಅವನ ಮೇಲೆ ದಾಳಿ ನಡೆಸಿದೆ. ಇದನ್ನು ನೋಡುತ್ತಿದ್ದ ಮಲ್ಲಿಕಾರ್ಜುನನ ಸ್ನೇಹಿತರು ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ.
ಬಾಲಕನನ್ನು ಎಳೆದೊಯ್ದ ಮೊಸಳೆ ಬಾಲಕನ ದೇಹವನ್ನ ಸಂಪೂರ್ಣವಾಗಿ ತಿಂದು ತಲೆ ಬುರುಡೆ ಮಾತ್ರ ಬಾಕಿ ಬಿಟ್ಟಿದೆ. ನಿನ್ನೆ ರಾತ್ರಿ ಬಾಲಕನ ತಲೆ ಬುರುಡೆ ಪತ್ತೆಯಾಗಿದೆ.
ಯಾಪಲದಿನ್ನಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.