ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಓರ್ವ ಸಾವು, ನಾಲ್ವರಿಗೆ ಗಾಯ! | Janata news
ಕಾರವಾರ : ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರವಾರದ ಅಂಕೋಲದ ಮಾಸ್ತಿಕಟ್ಟೆಯಲ್ಲಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಯ ಬಸ್ ಬೆಂಗಳೂರಿನಿಂದ ಗೋವಾಕ್ಕೆ ಸಂಚರಿಸುತ್ತಿತ್ತು. ಮುಂದಿನ ಟಯರ್ ಸಮಸ್ಯೆಯಿಂದ ದುರಸ್ತಿಗೆಂದು ರಸ್ತೆ ಪಕ್ಕದಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಅದರ ಹಿಂಭಾಗಕ್ಕೆ ಬಸ್ ಡಿಕ್ಕಿಯಾಯಿತು.
ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಒಬ್ಬರನ್ನು ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ.
ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Karwar, Ankola