ಗೌರವ ಇದ್ರೆ ತಾನೇ ಹಾಳಾಗೋಕೆ: ಸಿದ್ದರಾಮಯ್ಯ | Janata news
ಬೆಳಗಾವಿ : ಬಾಗಲಕೋಟೆಯ ಮಹಾಲಿಂಗಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನೆಗೆ ತೆರಳುವ ಮುನ್ನ ಮಾತನಾಡಿದ ಅವರು, 2006ರಲ್ಲಿ ಇದ್ದ ನನ್ನ ಗುಡ್ವಿಲ್ ಹಾಳಾಯಿತು ಎನ್ನುತ್ತಾರೆ. ಇವರಿಗೆ ಗುಡ್ ವಿಲ್ ಇದ್ದರೆ ಅಲ್ವಾ ಹಾಳಾಗುವುದು ಎಂದಿದ್ದಾರೆ.
ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸಿಮ್ಮ, ಸಮಯಕ್ಕೆ ತಕ್ಕಂತೆ ಅವರು ಸುಳ್ಳು ಹೇಳುತ್ತಾರೆ, ಕಣ್ಣೀರು ಹಾಕುವುದು ದೇವೇಗೌಡ ಮನೆಯವರ ಸಂಸ್ಕೃತಿ. ಒಲೈಕೆಗೂ ಮತ್ತು ಇನ್ಯಾರನ್ನೋ ನಂಬಿಸಲು ಕಣ್ಣೀರು ಹಾಕುತ್ತಾರೆ ಸಿಎಂ ಮಾಡಿದ್ದರಲ್ಲ ಅದೇನಾ ದ್ರೋಹ? ಕಣ್ಣೀರು ಹಾಕೋದು ಅವರ ಸಂಸ್ಕೃತಿ. ಕಣ್ಣೀರು ಹಾಕೋದೇನು ಹೊಸದೇನಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಸಿಎಂ ಆಗಿ ವೆಸ್ಟ್ ಆ್ಯಂಡ್ ಹೋಟೆಲ್ ನಿಂದ ಆಡಳಿತ ನಡೆಸಿ, ಒಬ್ಬ ಶಾಸಕರಿಗೂ ಸಿಗಲಿಲ್ಲ. ಕುಮಾರಸ್ವಾಮಿ ತಮ್ಮ ಮನೆಯಿಂದ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದ್ರಾ? ಅದರಲ್ಲಿ ಏನು ದೊಡ್ಡಸ್ಥಿಕೆ. ಕುಮಾರಸ್ವಾಮಿ ನೀಡುವ ಬೇಜವಾಬ್ದಾರಿ ಹೇಳಿಕೆಗಳಿಗೆ ಉತ್ತರವೇ ನೀಡಬಾರದು. ಹೋಟೆಲ್ ನಲ್ಲಿ ಕುಳಿತು ಆಡಳಿತ ನಡೆಸಿದ್ರೆ ಶಾಸಕರ ವಿಶ್ವಾಸ ಹೇಗೆ ಗಳಿಸೋಕೆ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಕಾಂಗ್ರೆಸ್ ಶಾಸಕರಿಗೆ 1900 ಕೋಟಿ ರೂ. ಹಣ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇವರ ಮನೆಯಿಂದ ಹಣ ತಂದು ಕೊಟ್ಟಿದ್ದಾರಾ, ನಮ್ಮ ಶಾಸಕರು ಬೆಂಬಲ ಕೊಟ್ಟಿದ್ದಕ್ಕೆ ಅವರು ಸಿಎಂ ಆಗಿದ್ದಾರೆ ತಿರುಗೇಟು ನೀಡಿದರು.
ನಾವು ಯಾರನ್ನ ಬೆಳೆಸುತ್ತೇವೋ ಅಂತವರಿಂದಲೇ ಮೋಸಗೊಳ್ಳುತ್ತಿದ್ದೇವೆ ಎಂಬ ಅವರ ಟೀಕೆಗೆ ಉತ್ತರಿಸಿದ ಅವರು, ದೇವೇಗೌಡ ಅವರು ಯಾರನ್ನ ಬೆಳಸಲ್ಲ, ಕುಟುಂಬಸ್ಥರನ್ನ ಬೆಳೆಸುತ್ತಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.