ಭಿಕ್ಷೆ ಬೇಡುತ್ತಿದ್ದ ವಿಶೇಷಚೇತನ ತಾಯಿ ಮಗನಿಗೆ ಕ್ರೇನ್ ಡಿಕ್ಕಿ! | Janata news
ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ ಮತ್ತು ಮಗವಿಗೆ ಕ್ರೇನ್ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ದುರ್ದೈವಿಗಳನ್ನು ಸಲೀಂ(10) ಮತ್ತು ರುಕ್ಸಾನ (40) ಎಂದು ಗುರುತಿಸಲಾಗಿದೆ. ತಾಯಿ- ಮಗ ವ್ಹೀಲ್ ಚೇರ್ ನಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಉತ್ತರ ಪ್ರದೇಶದಿಂದ ಬಂದಿರುವ ಇವರ ಕುಟುಂಬದವರು ದಾವಣಗೆರೆಯಲ್ಲಿ ವಾಸವಾಗಿದ್ದರು.
ಚನ್ನಗಿರಿಯಿಂದ ನಲ್ಲೂರಿಗೆ ಬರುತ್ತಿದ್ದ ಕ್ರೇನ್, ವೀಲ್ ಚೇರ್ನಲ್ಲಿ ರಸ್ತೆ ಬದಿ ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ, ಮಗನ ಮೇಲೆ ಏಕಾಏಕಿ ಹರಿದಿದ್ದು, ಪರಿಣಾಮ ಅವರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Davanagere