ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಚಾಲಕ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ | Janata news
ವಿಜಯಪುರ : ಸೋಮವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಮನೆಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.
ಭಾನುವಾರ ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯನ್ನು ಮುದ್ದೇಬಿಹಾಳ ಪಟ್ಟಣದ ಹುಡ್ಕೋ ನಿವಾಸಿ ಮಾರುತಿ ಹೊಸೂರ (35) ಎಂದು ಗುರುತಿಸಲಾಗಿದೆ.
ಕಾರು ನುಗ್ಗಿದ ರಭಸಕ್ಕೆ ರಸ್ತೆ ಪಕ್ಕದ ಮನೆ ಪೂರ್ತಿ ನೆಲಸಮವಾಗಿದೆ. ಮಾರುತಿ ಹೊಸೂರ(30) ಮೃತ ಚಾಲಕ. ಇವರು ಮುದ್ದೇಬಿಹಾಳ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಐವರ ಪೈಕಿ ನಾಲ್ವರಿಗೆ ಗಂಭೀರ ಗಾಯವಾಗಿದೆ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.. ಮನೆಯಲ್ಲಿದ್ದ ಕುರಿಯೊಂದು ಸಾವನ್ನಪ್ಪಿದೆ. ಮನೆಯಲ್ಲಿದ ಐವರು ಕುಟುಂಬದ ಸದಸ್ಯರು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.