ಗ್ರಾ.ಪಂ.ಗೆ ಪತ್ನಿ ಅವಿರೋಧ ಆಯ್ಕೆ, ಮರುದಿನವೇ ನೂತನ ಗ್ರಾಮ ಪಂಚಾಯತಿ ಸದಸ್ಯೆಯ ಪತಿ ಆತ್ಮಹತ್ಯೆ! | Janata news
ಚಾಮರಾಜನಗರ : ಗ್ರಾ.ಪಂ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೂಡ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವವರನ್ನು ನಿಂಗರಾಜು (27) ಎಂದು ಗುರುತಿಸಲಾಗಿದ್ದು, ನಿಂಗರಾಜುವಿನ ಪತ್ನಿ ಗಗನಾ ಎಂಬುವವರು ಎರಡು ದಿನಗಳ ಹಿಂದೆಯಷ್ಟೇ ಗ್ರಾಮದ ಎರಡನೇ ವಾರ್ಡಿನಿಂದ ಕೂಡ್ಲೂರು ಗ್ರಾಮ ಪಂಚಾಯತ್ಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.
ದೊಡ್ಡರಾಯಪೇಟೆಯ 2ನೇ ವಾರ್ಡ್ಗೆ ಪರಿಶಿಷ್ಟ ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಗಗನ ಎಂಬುವವರು ಗ್ರಾಪಂ ಸದಸ್ಯರಾಗಿ ಸೋಮವಾರ ಅವಿರೋಧ ಆಯ್ಕೆಯಾದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆಯಾದ ಖುಷಿಯಲ್ಲಿದ್ದ ಪತಿ, ಸ್ನೇಹಿತರಿಗೂ ಪಾರ್ಟಿ ಕೊಡಿಸಿ ಸಂಭ್ರಮಿಸಿದ್ದ.
ಇವರ ನಿಂಗರಾಜು ಮಂಗಳವಾರ ತಡರಾತ್ರಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.