ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ನಿಧನ : ಸಾವಿನಲ್ಲೂ ಒಂದಾದ ದಂಪತಿ! | Janata news
ಚಿಕ್ಕಮಗಳೂರು : ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪದ ಗಾಳಿಹಳ್ಳಿಯಲ್ಲಿ ನಡೆದಿದೆ.
ದೊಡ್ಡ ರಾಜಣ್ಣ (80), ರುದ್ರಮ್ಮ (74) ಮೃತಪಟ್ಟ ದಂಪತಿ. ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾಜಣ್ಣ ಅವರು ಅಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದರು.
ತಮ್ಮ ಪತಿ ಸಾವಿನ ಸುದ್ದಿಯನ್ನು ಕೇಳಿಸಿಕೊಂಡು ದೊಡ್ಡರಾಜಣ್ಣನವರ ಪತ್ನಿ, ರುದ್ರಮ್ಮ ಕೂಡ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತಪಟ್ಟ ಪತಿ ಪತ್ನಿಯ ಅಂತ್ಯಕ್ರಿಯೆಯನ್ನು ಒಟ್ಟಿಗೆ ನಡೆಸಲು ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದಾರೆ.
RELATED TOPICS:
English summary :Chikkamagaluru