ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಜಯಾನಂದ ಕಾಶಪ್ಪನವರ ವಿರುದ್ಧ ಎಫ್ಐಆರ್ ದಾಖಲು | Janata news
ಬಾಗಲಕೋಟೆ: : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹುನಗುಂದದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಇಳಕಲ್ ನಗರದ 9 ಮಂದಿಗೆ ಪೊಲೀಸರು ನೊಟೀಸ್ ನೀಡಲು ಹೋದಾಗ ಪೊಲೀಸರ ಕೆಲಸಕ್ಕೆ ಕಾಶಪ್ಪನವರ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.
ವಿಜಯಾನಂದ ಕಾಶಪ್ಪನವರ್ ಪೋಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮಾತ್ರವಲ್ಲದೆ ಪ್ರಕರಣವೊಂದರ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ತಮ್ಮ ಬೆಂಬಲಿಗರಿಗೆ ನೋಟೀಸ್ ನೀಡಿದ್ದ ಪೋಲೀಸರಿಗೆ ಪೋಲೀಸ್ ಠಣೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ಇಳಕಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಾನಂದ ಕಾಶಪ್ಪನವರ ಸೇರಿದಂತೆ ನಾಲ್ವರ ವಿರುದ್ಧ ಹುನಗುಂದ ಸರ್ಕಲ್ ಇನ್ ಸ್ಪೆಕ್ಟರ್ ಅಯ್ಯನಗೌಡ ಪಾಟೀಲ ನೇತೃತ್ವದಲ್ಲಿ ಪೊಲೀಸರು ಎಫ್ ಐಅರ್ ದಾಖಲಿಸಿದ್ದಾರೆ.