ಆಟೋ-ಲಾರಿ ನಡುವೆ ಅಪಘಾತದಿಂದಾಗಿ ಆಟೊ ಚಾಲಕ ಸಾವು! | Janata news
ತುಮಕೂರು : ಕೊರಟಗೆರೆ ಪಟ್ಟಣದ ಸಮೀಪದ ರಾಜ್ಯ ಹೆದ್ದಾರಿಯ ನವಿಲುಕುರಿಕೆ ಕ್ರಾಸ್ ನಲ್ಲಿ ಟಾಟಾ ಏಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಟೊ ಚಾಲಕ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಟ್ಟನರಸಮ್ಮನಪಾಳ್ಯದ ಮುತ್ತುರಾಜು (37) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಬೆಂಗಳೂರು ಕಡೆಯಿಂದ 100ಕೀಮೀ ಅತಿವೇಗದಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನ ಚಾಲಕ ಓವರ್ ಟೇಕ್ ಮಾಡಲು ಹೋಗಿ ಏಕಾಏಕಿ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಅಪಘಾತ ಸಂಭವಿಸಿದೆ.
ಟಾಟಾ ಏಸ್ವೇಗದಿಂದ ಆಟೋ ಮೂರು ಪಲ್ಟಿ ಹೊಡೆದಿದೆ. ಆಟೋ ಚಾಲಕ ಚರಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಟಾಟಾ ಏಸ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
English summary :Accident in Tumkur