ಅರ್ಕಾವತಿ ಡಿನೋಟಿಫಿಕೇಷನ್ ಕೇಸ್ ಹೊರ ಬಂದರೆ ಬಂಡವಾಳ ಬಯಲು! | Janata news
ಮೈಸೂರು : ಅರ್ಕಾವತಿ ಡಿನೋಟಿಫಿಕೇಷನ್ ವಿಚಾರ ಹೊರಗೆ ಬಂದರೆ ವಿಪಕ್ಷ ನಾಯಕರು ಎಲ್ಲಿಗೆ ಹೋಗುತ್ತಾರೆ ಗೊತ್ತಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಡಿನೋಟಿಫಿಕೇಶನ್ ವಿಚಾರವಾಗಿ ಯಡಿಯೂರಪ್ಪ ಅವರು ಜೈಲಿಗೆ ಹೋಗಬೇಕು ಎನ್ನುತ್ತಿದ್ದೀರಿ. ನೀವು ಮಾಡಿರುವುದನ್ನು ಹೊರಗಡೆ ತನ್ನಿ. ಆಗ ಗೊತ್ತಾಗುತ್ತೇ ನೀವು ಎಲ್ಲಿಗೆ ಹೋಗುತ್ತೀರಾ ಅಂತಾ ಎಂದು ತಿರುಗೇಟು ನೀಡಿದರು.
ಇವರು ಜೈಲಿಗೆ ಹೋಗಿದ್ದರು, ಅವರು ಜೈಲಿಗೆ ಹೋಗಿದ್ದರು ಅನ್ನುವ ಮಾತುಗಳೆಲ್ಲಾ ದೊಡ್ಡವರ ಬಾಯಲ್ಲಿ ಬರಬಾರದು. ಜವಾಬ್ದಾರಿಯುತ ರಾಜಕೀಯ ನಾಯಕರು ಶಾಂತಿಯ ವಾತಾವರಣ ನಿರ್ಮಾಣ ಮಾಡಬೇಕು, ಮಾನಸಿಕ ನೆಮ್ಮದಿ ಕದಡುವ ಮಾತುಗಳು ಯಾರಿಂದಲೂ ಬರಬಾರದು ಎನ್ನುವ ಮೂಲಕ ಸಿಎಂ ಬಿಎಸ್ ವೈ ರಾಜೀನಾಮೆಗೆ ಆಗ್ರಹಿಸಿದ ವಿರೋಧ ಪಕ್ಷಗಳಿಗೆ ಮಾತಿನ ಚಾಟಿ ಬೀಸಿದರು.