ಗ್ರಾಪಂ ಚುನಾವಣೆ ಮತ ಎಣಿಕೆ ಕೇಂದ್ರದಲ್ಲೇ ಹೃದಯಾಘಾತದಿಂದ ಚುನಾವಣಾಧಿಕಾರಿ ನಿಧನ! | Janata news
ಮೈಸೂರು : ಮತ ಎಣಿಕೆ ಕಾರ್ಯದಲ್ಲಿ ಕರ್ತವ್ಯನಿರತರಾಗಿದ್ದ ಚುನಾವಣಾಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಈ ಘಟನೆ ಮೈಸೂರು ಜಿಲ್ಲೆ ಪಿರಿಯಪಟ್ಟಣದಲ್ಲಿ ನಡೆದಿದೆ.
ಮೃತಪಟ್ಟ ಅಧಿಕಾರಿಯನ್ನು ಬೋರೆಗೌಡ (52) ಎಂದು ಗುರುತಿಸಲಾಗಿದೆ. ಎನ್. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಚುನಾವಣಾ ಅಧಿಕಾರಿಯಾಗಿ ಬೋರೆಗೌಡ ನೇಮಕವಾಗಿದ್ದರು.
ಲೋಕೋಪಯೋಗಿ ಇಲಾಖೆ ಎಇಇ ಆಗಿದ್ದ ಬೋರೆಗೌಡ ಅವರಿಗೆ ಮತ ಎಣಿಕೆ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿದೆ.
ಎದೆ ನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಬೋರೆಗೌಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
RELATED TOPICS:
English summary :Mysuru