ಮನೆಯ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್: 8 ಜನರ ದಾರುಣ ಸಾವು | Janata news
ಸುಳ್ಯ : ಪುತ್ತೂರು ಕಡೆಯಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾನತ್ತೂರು ಬಳಿ ಪಲ್ಟಿಯಾಗಿದ್ದು, ಎಂಟು ಜನ ಸಾವನ್ನಪ್ಪಿರುವ ಘಟನೆ ಕಲ್ಲಪ್ಪಳ್ಳಿ ಬಳಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಗಡಿಗುಡ್ಡೆ ಎಂಬಲ್ಲಿ ಈ ಅವಘಡ ಸಂಭವಿಸಿದ್ದು, ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ಬಸ್ ತೆರಳುತ್ತಿತ್ತು. ಪಾಣತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿ ಮನೆಯೊಂದರ ಮೇಲೆ ಬಸ್ ಬಿದ್ದು ದುರಂತ ಸಂಭವಿಸಿದೆ.
ಕೊಡಗಿನ ಚೆತ್ತುಕಯದ ವರನ ಮನೆಯಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ, ಪುತ್ತೂರಿನ ಈಶ್ವರ ಮಂಗಲದ ವಧುವಿನ ಮನೆಯಿಂದ ಹೊರಟ್ಟಿದ್ದ ದಿಬ್ಬಣದ ಬಸ್ ಸುಳ್ಯದ ಅಲೆಟ್ಟಿ ಮೂಲಕ ಕಲ್ಲಪಲ್ಲಿ ಪಾಣತ್ತೂರು ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ಪೆರಿಯಾರಂ ಘಾಟ್ ರಸ್ತೆಯಲ್ಲಿ ಚಾಲನ ನಿಯಂತ್ರಣ ತಪ್ಪಿ ಬಸ್ ಮನೆಯ ಮೇಲೆ ಬಿದ್ದಿದೆ.
ಬಸ್ನಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದು, ಮೃತರ ಸಂಖ್ಯೆ ಎಂಟಕ್ಕೇರಿದ್ದು, ಹತ್ತಕ್ಕೂ ಹೆಚ್ಚು ಜನರ ಪರಿಸ್ಥಿತಿ ಗಂಭೀರವಾಗಿದೆ. 30 ಕ್ಕೂ ಹೆಚ್ಚು ಮಂದಿಗೆ ಗಾಯಗೊಡಿದ್ದಾರೆ.
ಮೃತರನ್ನು ಆದರ್ಶ್(12), ಶ್ರೇಯಸ್(13), ರವಿಚಂದ್ರನ್(40), ರಾಜೇಶ್(45), ಸುಮತಿ(50), ಜಯಲಕ್ಷ್ಮಿ(39) ಮತ್ತು ಸಸೀಂದ್ರ ಪೂಜಾರ(43) ಮೃತ ದುರ್ದೈವಿಗಳು.