ಶಾಸಕರ ಪುತ್ರ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ! | Janata news
ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣವರ ಪುತ್ರನ ಕಾರಿನ ಮೇಲೆ ದಾಳಿ ನಡೆದಿದೆ.
ಭಾನುವಾರ ರಾತ್ರಿ ಕಾರಿನಲ್ಲಿ ಶಾಸಕರ ಪುತ್ರ, ಬಿಜೆಪಿ ಮುಖಂಡ ಶಶಿಧರ ನಿಂಬಣ್ಣವರ ಬರುತ್ತಿದ್ದರು. ಆ ವೇಳೆ ಕಾರನ್ನು ಅಡ್ಡಗಟ್ಟಿದ ಸಂಬಂಧಿಕರು ಕಾರಿನ ಮೇಲೆ ಕಲ್ಲು ತೂರಿದ್ದಾರೆ.
ಹೊಲಕ್ಕೆ ಹೋಗಿ ವಾಪಸ್ ಮಾರುತಿ-800 ಕಾರಿನಲ್ಲಿ ಮನೆಗೆ ಬರುವಾಗ, ಅಡ್ಡಗಟ್ಟಿದ ಸಂಬಂಧಿಕರು ಜಮೀನಿನ ವಿಚಾರವಾಗಿ ಇದ್ದ ತಂಟೆಯ ಸಿಟ್ಟಿನಿಂದ ಕಾರಿನ ಗ್ಲಾಸ್ ಒಡೆದು ಹಾನಿ ಮಾಡಿದ್ದಾರೆ. ಅಲ್ಲದೆ ಜೀವ ಬೆದರಿಕೆಯನ್ನೂ ಹಾಕಿದದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.
English summary :Kalagatagi