ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ! | Janata news
ಪುತ್ತೂರು : ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ಎಂಬಲ್ಲಿ ನಡೆದಿದೆ.
ಸೈಂಟ್ ಅಲೋಸಿಯಸ್ ಕಾಲೇಜಿನಲ್ಲಿ ಬಿಬಿಎ ಪದವಿ ಮುಗಿಸಿದ್ದ, ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್ (21)ಆತ್ಮಹತ್ಯೆ ಮಾಡಿಕೊಂಡ ಯುವತಿ.
ಜನವರಿ 3ರಂದು ರಾತ್ರಿ ಸುಮಾರು 11.30ರ ವೇಳೆಗೆ ತನ್ನ ಕೊಠಡಿಯೊಳಗೆ ಮಲಗಿದ್ದ ನವ್ಯಾ ಜನವರಿ 4ರಂದು ಬೆಳಿಗ್ಗೆ 8 ಗಂಟೆಯಾದರೂ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಗಾಬಾರಿಗೊಂಡ ಪೋಷಕರು ಆಕೆಯ ಮೊಬೈಲ್ಗೆ ಕರೆಮಾಡಿದ್ದಾರೆ.
ಆದರೆ ಆಕೆ ಕರೆ ಸ್ವೀಕರಿಸಲಿಲ್ಲ. ಬಳಿಕ ತಂದೆ ವಿ.ಜೆ.ಜೋಸೆಫ್ ನವ್ಯಾ ಮಲಗಿದ್ದ ಕೊಠಡಿಯ ಬಾಗಿಲು ಮುರಿದು ಒಳಪ್ರವೇಶಿಸಿದ್ದಾರೆ. ಈ ವೇಳೆ ಬೆಂಕಿ ಹಚ್ಚಿಕೊಂಡ ಸ್ಥತಿತಲ್ಲಿ ಪತ್ತೆಯಾಗಿತ್ತು. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.