ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು | Janata news
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ನಂದಿನಿ ನದಿಗೆ ಕಾರೊಂದು ಬಿದ್ದ ಘಟನೆ ನಡೆದಿದೆ.
ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಈರ್ವರು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದೆ.
ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಆತನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳಕ್ಕೆ ತೆರಳಿ ವಾಪಾಸ್ಸು ಬರುವ ಹೊತ್ತಿಗೆ ಹಠಾತ್ತನೆ ರಸ್ತೆ ಪಕ್ಕದ ನಂದಿನಿ ನದಿಗೆ ಕಾರು ಜಾರಿ ನದಿಯಲ್ಲಿ ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರ್ ನಿಂದ ಹೊರಬಂದು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಘಟನೆಯ ಕುರಿತು ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Mangalore