ಬಿಎಸ್ವೈಗೆ ಡಿನೋಫಿಕೇಷನ್ ಕಂಟಕ: ಡಿ ನೋಟಿಫಿಕೇಷನ್ ಪ್ರಕರಣ ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ | Janata news
ಬೆಂಗಳೂರು : ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ತಮ್ಮ ವಿರುದ್ಧದ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಎಸ್ ವೈ ಹೈಕೋರ್ಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯನ್ನು ನಿರಾಕರಿಸಿರುವ ನ್ಯಾಯಾಲಯ ಲೋಕಯುಕ್ತ ಪೊಲೀಸರಿಗೆ ತನಿಖೆ ಮುಂದುವರೆಸಲು ಅನುಮತಿ ನೀಡಿದೆ. ನ್ಯಾಯಾಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಾಪೀಠ ಈ ಆದೇಶವನ್ನು ಹೊರಡಿಸಿದೆ.
ನ್ಯಾಯಾಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಾಪೀಠ ಆದೇಶವನ್ನು ಹೊರಡಿಸಿದ್ದು, ಇದೇ ವೇಳೆ ನ್ಯಾಯಪೀಠ ಅರ್ಜಿದಾರ ಸಿಎಂ ಬಿಎಸ್ವೈ ಅವರಿಗೆ 25 ಸಾವಿರ ದಂಡವನ್ನು ಹಾಕಿದೆ ಎನ್ನಲಾಗಿದೆ.
ಆರ್.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಹಾಲಿ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿದ್ದರು. ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು.