ರಾಜ್ಯದಲ್ಲಿ ಕೋಳಿ, ಮೊಟ್ಟೆ ಮಾರಾಟಕ್ಕೆ ನಿರ್ಬಂಧವಿಲ್ಲ: ಪ್ರಭು ಚೌವ್ಹಾಣ್ | Janata news
ಬೆಂಗಳೂರು : ರಾಜ್ಯದಲ್ಲಿ ಕೋಳಿ ಮೊಟ್ಟೆ ಹಾಗೂ ಕೋಳಿ ಮಾಂಸ ಮಾರಾಟಕ್ಕೆ ಯಾವುದೇ ನಿರ್ಬಂಧವಿಲ್ಲ ಆದರೂ ಮುಂಜಾಗ್ರತಾ ಕ್ರಮವಾಗಿ ನಿಗಾ ವಹಿಸಲು ಜಿಲ್ಲಾಧಿಕಾರಿಗಳಿಗೆ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಕೇರಳ ರಾಜ್ಯದಲ್ಲಿ ಹಕ್ಕಿಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಚಿವರು ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ, ನಂತರ ಮಾತನಾಡಿದ ಸಚಿವರು ರಾಜ್ಯದಲ್ಲಿ ಇದುವರೆಗೆ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಆದರೂ ಮುಂಜಾಗ್ರತಾ ಕ್ರಮವಾಗಿ ನಿಗಾವಹಿಸಲು ಸೂಚನೆ ನೀಡಿದ್ದಾರೆ.
ಕೇರಳ ರಾಜ್ಯವನ್ನು ಹೊರತುಪಡಿಸಿ ಇತರೇ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ ಆದರೂ ಇಲಾಖೆಯ ಅಧಿಕಾರಿಗಳು ಹೆಚ್ಚು ಎಚ್ಚರಿಕೆವಹಿಸಿ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ ಎಂದರು.