ಪ್ರಮಾಣವಚನ ಸ್ವೀಕರಿಸುವವರ ಹೆಸರು ಪ್ರಕಟ, ಸಿಎಂ ಯಡಿಯೂರಪ್ಪ ಘೋಷಣೆ: ಇಲ್ಲಿದೆ ಪಟ್ಟಿ | Janata news
ಬೆಂಗಳೂರು : ಇಂದು ಜನವರಿ 13 ರಂದು ಮಧ್ಯಾಹ್ನ 3.50ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿರುವವರ 7 ಶಾಸಕರ ಹೆಸರುಗಳನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಎಂಟಿಬಿ ನಾಗರಾಜ್,
ಆರ್ ಆಂಕರ್,
ಸಿ.ಪಿ. ಯೋಗೇಶ್ವರ್,
ಅರವಿಂದ್ ಲಿಂಬಾವಳಿ,
ಎಸ್ ಅಂಗಾರ,
ಉಮೇಶ್ ಕತ್ತಿ,
ಮುರುಗೇಶ್ ಆರ್ ನಿರಾಣಿ ಅವರಿಗೆ ಮಂತ್ರಿಭಾಗ್ಯ ಸಿಕ್ಕಿದೆ.
ಹೆಸರುಗಳಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪ್ರಕಟಿಸಿದ್ದಾರೆ.
ಅಬಕಾರಿ ಸಚಿವ ಆರ್ ನಾಗೇಶ್ ಅವರನ್ನ ಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದೆ. ಅವರು ರಾಜೀನಾಮೆ ನೀಡಿದರೆ ಎಂಟು ಖಾತೆಗಳು ಖಾಲಿ ಉಳಿಯುತ್ತವೆ. ಈಗ ಏಳು ಮಂದಿಯನ್ನ ಸಂಪುಟಕ್ಕೆ ಸೇರ್ಪಡೆ ಮಾಡಲಾಗುತ್ತಿದೆ. ಇನ್ನೊಂದು ಖಾತೆ ಖಾಲಿ ಉಳಿಯಲಿದೆ.
ಆದರೆ ಇಂದು ಅಬಕಾರಿ ಸಚಿವ ಎಚ್. ನಾಗೇಶ್ ರಾಜೀನಾಮೆ ಪಡೆಯುವುದಿಲ್ಲ. ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ನಾಳೆ ರಾಜೀನಾಮೆ ಪಡೆಯುತ್ತೇನೆ ಎಂದು ಬಿಎಸ್ ವೈ ಹೇಳಿದರು.
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಈ ಬಾರಿ ಕೂಡ ಅವಕಾಶ ಸಿಕ್ಕಿಲ್ಲ. ವರಿಷ್ಠರ ಸೂಚನೆ ಮೇರೆಗೆ ಮುನಿರತ್ನ ಅವರಿಗೆ ಈ ಬಾರಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ ಎನ್ನಲಾಗಿದೆ.