ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜ.20ಕ್ಕೆ ಮುಂದೂಡಿಕೆ! | Janata news
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜ.20ರವರೆಗೆ ಮುಂದೂಡಿಕೆ ಮಾಡಿದೆ.
ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಟರಾಜನ್ ಅವರು ಬುಧವಾರ ಪ್ರಕರಣದ ವಿಚಾರಣೆ ನಡೆಸಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಹೀಗಾಗಿ ಇನ್ನೂ ಒಂದು ವಾರ ಕಾಲ ವಿಚಾರಣೆ ಮುಂದೂಡುವುದಾಗಿ ತಿಳಿಸಿದರು.
RELATED TOPICS:
English summary :Vinay Kulkarni