ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಸಿಡಿ ಬ್ಲ್ಯಾಕ್ ಮೇಲ್ ಮಾಡ್ತಾರೆ :ಮಾಜಿ ಸಿಎಂ ಸಿದ್ದರಾಮಯ್ಯ | Janata news
ಮೈಸೂರು : ವೀಕ್ ಚೀಫ್ ಮಿನಿಸ್ಟರ್ಗೆ ಮಾತ್ರ ಸಿಡಿ ಬ್ಲ್ಯಾಕ್ಮೇಲ್ ಮಾಡ್ತಾರೆ. ಸಿಡಿ ತೋರಿಸಿ ಬ್ಲಾಕ್ಮೇಲ್ ಮಾಡಿದವರ ಮೇಲೆ ಸಿಎಂ ಕ್ರಿಮಿನಲ್ ಕೇಸ್ ಹಾಕಲಿ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಷ್ಟು ದಿನಗಳ ಕಾಲ ಮಂತ್ರಿಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ. ಮಂತ್ರಿಮಂಡಲ ವಿಸ್ತರಣೆಗೆ ಯಾಕೆ ತಡವಾಯಿತು. ಗೋಗರೆದು, ಕೈಕಾಲು ಹಿಡಿದು ಮಂತ್ರಿಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ಕುಟುಕಿದರು..
ಸಿಡಿ ವಿಚಾರದಲ್ಲಿ ಸಿಎಂ ಬ್ಲ್ಯಾಕ್ಮೇಲ್ಗೆ ಒಳಗಾಗಿದ್ದರೋ ಅಥವಾ ಒತ್ತಡಕ್ಕೆ ಒಳಗಾಗಿದ್ದರೋ ನನಗೆ ಗೊತ್ತಿಲ್ಲ. ಎಲ್ಲಾ ಮುಖ್ಯಮಂತ್ರಿಗಳನ್ನು ಬ್ಲ್ಯಾಕ್ಮೇಲ್ ಮಾಡಲು ಆಗುವುದಿಲ್ಲ.
ವೀಕ್ ಇದ್ದವರಿಗೆ ಈ ರೀತಿ ಮಾಡ್ತಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಿಮಿನಲ್ ಕೇಸ್ ಹಾಕಲಿ. ಇದನ್ನ ಆ ಪಕ್ಷದವರೇ ಸಿಡಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಇದನ್ನ ಪ್ರತಿಪಕ್ಷದವರು ಮಾಡುತ್ತಿಲ್ಲ. ಸಿಡಿ ಬಗ್ಗೆ ಸತ್ಯಾಂಶ ಹೊರಬರಲು ತನಿಖೆ ನಡೆಸಲಿ ಎಂದು ಆಗ್ರಹಿಸಿದರು.
ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಇದೆ ಎಂಬ ಬಗ್ಗೆ ಬಹಳ ಹಿಂದೆ ನಾನು ಹೇಳಿದ್ದೇನೆ. ಬಿಡಿಎ ಹಗರಣದಲ್ಲಿ 7ಕೋಟಿ 40 ಲಕ್ಷ ಹಣ ಅವರ ಕುಟುಂಬದವರ ಅಕೌಂಟ್ಗೆ ಹೋಗಿದೆ. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ? ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ, ಅವರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಉಂಟಾಗಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.