ಭದ್ರಾವತಿ : ಕ್ಷಿಪ್ರ ಕಾರ್ಯ ಪಡೆ(ರಾಪಿಡ್ ಆಕ್ಷನ್ ಫೋರ್ಸ್) ಘಟಕದ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಷಾ | Janata news
ಭದ್ರಾವತಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಶನಿವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆರಂಭವಾಗಲಿರುವ ಸಿಆರ್ಪಿಎಫ್ನ, ಕ್ಷಿಪ್ರ ಕಾರ್ಯ ಪಡೆ(ರಾಪಿಡ್ ಆಕ್ಷನ್ ಫೋರ್ಸ್), ಘಟಕದ ಶಂಕುಸ್ಥಾಪನೆ ಹಾಗೂ ಭೂಮಿ ಪೂಜೆಯನ್ನು ನೆರವೇರಿಸಿದರು.
ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಈ ಕ್ಷಿಪ್ರ ಕಾರ್ಯ ಪಡೆ( ಆರ್.ಎ.ಎಫ್) ಘಟಕ ಸ್ಥಾಪನೆಯಾಗಲಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಮಧ್ಯಾಹ್ನ 3.45ಕ್ಕೆ ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನಗರದ ಬೊಮ್ಮನಕಟ್ಟೆ ಬಳಿಯಿರುವ ಹೆಲಿಪ್ಯಾಡ್ ಗೆ ಬಂದಿಳಿದ ಗೃಹ ಸಚಿವರಿಗೆ ಜಿಲ್ಲಾ ವಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆತ್ಮೀಯವಾದ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಘಟಕ ನಿರ್ಮಾಣಕ್ಕಾಗಿ ಶಾಸ್ತ್ರೋಕ್ತವಾಗಿ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅಮಿತ್ ಷಾ ಪಾಲ್ಗೊಂಡರು.