ದಿ ಸುರೇಶ ಅಂಗಡಿ ನಿವಾಸಕ್ಕೆ ಅಮಿತ್ ಶಾ ಭೇಟಿ! | Janata news
ಬೆಳಗಾವಿ : ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿಯವರ ನಿವಾಸಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು.
ಬೆಳಗಾವಿಯ ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿನ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ ಸುರೇಶ ಅಂಗಡಿ ಅವರ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ದಿ.ಸುರೇಶ ಅಂಗಡಿಯವರ ಪುಷ್ಪಾಲಂಕೃತ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದಿ.ಸುರೇಶ ಅಂಗಡಿಯವರ ನಿಧನ ಪಕ್ಷಕ್ಕೆ ಹಾಗೂ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದರು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿ ಅರುಣಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್ ಉಪಸ್ಥಿತರಿದ್ದರು.