ಪುಟ್ಟ ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ, ಆತ್ಮಹತ್ಯೆಗೆ ಶರಣಾದ ದಂಪತಿ! | Janata news
ಬೆಳಗಾವಿ : ಮಕ್ಕಳನ್ನು ಹತ್ಯೆಗೈದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.
ರಾಮದುರ್ಗ ಪಟ್ಟಣದ ನಿವಾಸಿಗಳಾದ ಪ್ರವೀಣ್ ಶೆಟ್ಟರ್ (37), ಪತ್ನಿ ರಾಜೇಶ್ವರಿ (27), ಮಕ್ಕಳು ಅಮೃತಾ (8) ಹಾಗೂ ಅದ್ವಿತ್ (6) ಮೃತರು. ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ರಾಮದುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :Belagavi