ಮನೆಯ ಮುಂದಿದ್ದ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ದಾರುಣ ಸಾವು | Janata news
ಮೈಸೂರು : ನಿರ್ಮಾಣ ಹಂತದಲ್ಲಿದ್ದ ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ತೆಂಕಲಕೊಪ್ಪಲಿನ ನಟರಾಜ್ರ ಪುತ್ರ ಒಂದೂವರೆ ವರ್ಷ ದಯಾನಂದ ನಿರ್ಮಾಣದ ಹಂತದಲ್ಲಿದ್ದ ಮನೆ ಎದುರು ಅಕ್ಕನ ಜೊತೆ ಆಟವಾಡುತ್ತಿದ್ದ, ಅಕ್ಕ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ದಯಾನಂದ್ ಕಾಣೆಯಾಗಿದ್ದ. ಈ ವೇಳೆ ಮಗು ಸಂಪಿಗೆ ಬಿದ್ದಿದ್ದಾನೆ.
ಆತನಿಗಾಗಿ ಹುಡುಕಾಡಿದಾಗ ಎದುರಿಗಿದ್ದ ನೀರಿನ ಸಂಪಿನಲ್ಲಿ ಬಿದ್ದು ದಾರುಣವಾಗಿ ಸಾವನ್ನಪ್ಪಿರುವುದು ಕಂಡುಬಂದಿದೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
English summary :Mysuru