ಖಾತೆ ಹಂಚುವುದು ಅಷ್ಟು ಸುಲಭದ ವಿಚಾರವಲ್ಲ: ಸಿಎಂ ಬಿಎಸ್ವೈ | Janata news
ಬೆಂಗಳೂರು : ಸಂಪುಟ ರಚನೆ ಮಾಡುವುದು, ಖಾತೆ ಹಂಚುವುದು ಸುಲಭವಲ್ಲ. ಸ್ವಲ್ಪ ಸಣ್ಣಪುಟ್ಟ ಅಸಮಾಧಾನವಿರಬಹುದು. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಇಂದು ಖಾತೆ ಹಂಚಿಕೆ ಮಾಡಿದ್ದು, ಈ ಮೂಲಕ ಇತರ ಕೆಲವು ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಿದ್ದರು. ಆದರೆ ಖಾತೆ ಹಂಚಿಕೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು.
ಸಚಿವರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಲ್ಲಾ ಸಚಿವರೂ ಸಮಾಧಾನದಿಂದಲೇ ಇದ್ದಾರೆ ಎಂದು ಬಿಎಸ್ವೈ ಹೇಳಿದ್ದಾರೆ.
ಖಾತೆ ಬದಲಾವಣೆ ಸಂದರ್ಭದಲ್ಲಿ ವ್ಯತ್ಯಾಸವಾಗಿ ಕೆಲವು ಗೊಂದಲಗಳು ಮೂಡಿದ್ದವು. ನಾನು ಎಲ್ಲ ಸಚಿವರನ್ನು ವೈಯಕ್ತಿಕವಾಗಿ ಕರೆದು ಮಾತನಾಡಿಸಿ ಸಮಾಧಾನ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಖಾತೆ ಹಂಚಿಕೆ ಮಾಡಿ ಎಲ್ಲರನ್ನು ತೃಪ್ತಿ ಪಡಿಸುವುದು ಸುಲಭದ ಕೆಲಸ ಅಲ್ಲ ಎಂದಿರುವ ಬಿಎಸ್ವೈ, ಕೊಟ್ಟ ಖಾತೆ ಸರಿಯಿಲ್ಲ ಎಂದಾದರೆ ಮುಂದೆ ಬದಲಾವಣೆ ಮಾಡಬಹುದು, ಅವರು ಈಗ ನೀಡಿದ ಖಾತೆಯಲ್ಲಿ ಸ್ವಲ್ಪ ದಿವಸ ಕೆಲಸ ಮಾಡಲಿ. ಸರಿ ಹೋಗಲಿಲ್ಲ ಅಂದರೆ ಆಮೇಲೆ ಉತ್ತಮ ಖಾತೆ ನೀಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ