ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ | Janata news
ಶಿವಮೊಗ್ಗ : ಪತಿ ಹಾಗೂ ಪತಿಯ ಕುಟುಂಬಸ್ಥರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ನ್ಯೂ ಮಂಡ್ಲಿಯ ಎರಡನೇ ಕ್ರಾಸ್ ನಿವಾಸಿ ಸವಿತ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರಿಬ್ಬರಿಗೂ 7 ವರ್ಷದ ಮಗನಿದ್ದಾನೆ.
ನ್ಯೂ ಮಂಡ್ಲಿ ನಿವಾಸಿಯಾದ ಆಟೋ ಚಾಲಕ ಹೇಮಂತ್ ಎಂಬುವರನ್ನು 10 ವರ್ಷದ ಹಿಂದೆ ಮದುವೆಯಾಗಿದ್ಧಳು. ಮದುವೆಯಾದಾಗಿನಿಂದ ಹೇಮಂತ್, ಆತನ ತಾಯಿ ಹಾಗೂ ಸಹೋದರಿಯರು ವರದಕ್ಷಿಣೆ ತರುವಂತೆ ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಹೇಮಂತ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸವಿತ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಸದ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.