ಸಚಿವರ ಅಸಮಾಧಾನಕ್ಕೆ ಮಣಿದ ಸಿಎಂ ಬಿಎಸ್ ವೈ, ಮತ್ತೆ ಖಾತೆ ಬದಲಾವಣೆ! | Janata news
ಬೆಂಗಳೂರು : ನೂತನ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರು ಅಸಮಾಧನದ ಹಿನ್ನೆಲೆಯಲ್ಲಿ ಇಂದು ಮತ್ತೆ ನಾಲ್ವರ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ಇಂದು ಮತ್ತೆ ನಾಲ್ವರು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ.
ಎಂಟಿಬಿ ನಾಗರಾಜ್ ಅವರು ವಸತಿ ಖಾತೆಗಾಗಿ ಮನವಿ ಮಾಡಿದ್ದರು ಎನ್ನಲಾಗಿತ್ತು. ಆದರೆ ಅವರಿಗೆ ಅಬಕಾರಿ ಖಾತೆ ನೀಡಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ಅವರು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದರು. ಇದೀಗ ಎಂಟಿಬಿಗೆ ಪೌರಾಡಳಿತ, ಸಕ್ಕರೆ ಖಾತೆ ನೀಡಲಾಗಿದೆ.
ಕೆ.ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ, ಎಂಟಿಬಿ ನಾಗರಾಜ್ ಗೆ ಪೌರಾಡಳಿತ, ಸಕ್ಕರೆ ಖಾತೆ, ಆರ್.ಶಂಕರ್ ಅವರಿಗೆ ತೋಟಗಾರಿಕೆ, ರೇಷ್ಮೆ ಖಾತೆ ಮತ್ತು ಡಾ.ಕೆ.ಸಿ.ನಾರಾಯಣಗೌಡ ಅವರಿಗೆ ಯುವಜನ ಕ್ರೀಡೆ ಜೊತೆಗೆ ಹೆಚ್ಚುವರಿಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಖಾತೆ ನೀಡಲಾಗಿದೆ.
ಪಟ್ಟಿಯಲ್ಲಿ ಸಚಿವರ ಖಾತೆಗಳು ಹೀಗಿವೆ:
1. ಜೆ.ಸಿ.ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ ಇಲಾಖೆ
2. ಜೆ.ಸಿ.ಮಾಧುಸ್ವಾಮಿ -ಹಜ್ ಮತ್ತು ವಕ್ಫ್ ಖಾತೆ
3. ಎಂಟಿಬಿ ನಾಗರಾಜ್ -ಪೌರಾಡಳಿತ ಮತ್ತು ಸಕ್ಕರೆ ಖಾತೆ
4. ಕೆ.ಗೋಪಾಲಯ್ಯ -ಅಬಕಾರಿ ಖಾತೆ
5. ಆರ್.ಶಂಕರ್ -ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
6. ಕೆ.ಸಿ. ನಾರಾಯಣಗೌಡ -ಯುವ ಸಬಲೀಕರಣ & ಕ್ರೀಡೆ
ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ
7. ಅರವಿಂದ ಲಿಂಬಾವಳಿ -ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ