ವಿನಯ್ ಕುಲಕರ್ಣಿ ಮಾವ ನಿಧನ: ಅಂತಿಮ ದರ್ಶನ ಪಡೆಯಲು ಕೋರ್ಟ್ ಅನುಮತಿ | Janata news
ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಮಾವ ಸವದತ್ತಿಯ ಗಂಗಣ್ಣ ಶಿಂತ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ಅನುಮತಿ ನೀಡಿದೆ.
ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಮಾವನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ಗಂಟೆ ಕಾಲಾವಕಾಶ ನೀಡಿದೆ.
ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ತಂದೆ ಗಂಗಪ್ಪ ಸಿಂತ್ರಿ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು. ಹಾಗಾಗಿ, ಅವರ ಅಂತಿಮ ದರ್ಶನ ಪಡೆಯಲು ಸಿಬಿಐ ನ್ಯಾಯಾಲಯ ಅವಕಾಶ ನೀಡಿದೆ. ಹೀಗಾಗಿ, ಮಾಜಿ ಸಚಿವರನ್ನು ಇಂದು ಖಾಕಿ ಪಡೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ದರು.
ಅಂತ್ಯಕ್ರಿಯೆಗೂ ಮುನ್ನವೇ ಜೈಲಿಗೆ ವಾಪಸ್ ಆದರು ಎಂದು ಹೇಳಲಾಗಿದೆ.