ಎಲ್ಲಾ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ತಿಳಿದಿದ್ದರೆ, ಇಡಿ ದೇಶ ಹೊತ್ತಿ ಉರಿಯುತ್ತಿತ್ತು - ರಾಹುಲ್ ಗಾಂಧಿ | Janata news
ವಯನಾಡ : ಕಾಂಗ್ರೆಸ್ ಮಾಜಿ ರಾಷ್ಟ್ರಿಯ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದು, ಕೃಷಿ ಕಾಯ್ದೆಗಳ ಕುರಿತು ಎಲ್ಲಾ ರೈತರಿಗೆ ಸಂಪೂರ್ಣವಾಗಿ ಅರ್ಥವಾದರೆ ದೇಶ ಹೊತ್ತಿ ಉರಿಯುತಿತ್ತು, ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವದಂದು ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ದೇಶದ ರಾಜಧಾನಿ ನವದೆಹಲಿ ಹೊತ್ತಿ ಉರಿದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು, ರೈತರಿಗೆ ಸಂಪೂರ್ಣವಾಗಿ ಅರ್ಥವಾದರೆ ದೇಶ ಹೊತ್ತಿ ಉರಿಯುತಿತ್ತು, ಎಂದಿದ್ದಾರೆ.
ಇಂದಿನ ದೇಶದ ಪರಿಸ್ಥಿತಿ ನಿಮಗೆ ತಿಳಿದಿದೆ, ಏನು ನಡೆಯುತ್ತಿದೆ ಎಂಬುದನ್ನು ಪ್ರತಿಯೊಬ್ಬರೂ ನೋಡುವುದು ಸ್ಪಷ್ಟವಾಗಿದೆ. 2-3 ದೊಡ್ಡ ಉದ್ಯಮಿಗಳ ಹಿತದೃಷ್ಟಿಯಿಂದ ಭಾರತವನ್ನು ಪ್ರಧಾನಿ ನಡೆಸುತ್ತಿದ್ದಾರೆ. ಇಂದು ಪ್ರತಿಯೊಂದು ಉದ್ಯಮವು 3-4 ಜನರಿಂದ ಏಕಸ್ವಾಮ್ಯವನ್ನು ನಿಯಂತ್ರಿಸುತ್ತಿದೆ, ಎಂದು ಹೇಳಿದ್ದಾರೆ.
ರೈತರ ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ನಂತರ ರಾಹುಲ್ ಗಾಂಧಿಯವರು, ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಈ ಕೂಡಲೇ ರದ್ದುಪಡಿಸಬೇಕೆಂದು ನರೇಂದ್ರ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಹೆಚ್ಚಿನ ರೈತರಿಗೆ ಕೃಷಿ ಮಸೂದೆಗಳ ಕುರಿತು ಸಂಪೂರ್ಣವಾಗಿ ತಿಳಿದಿಲ್ಲ. ಒಂದು ವೇಳೆ ತಿಳಿದಿದ್ದರೆ ಇಡಿ ದೇಶ ಹೊತ್ತಿ ಉರಿಯುತ್ತಿತ್ತು, ಎಂದು ರಾಹುಲ್ ತಮ್ಮ ಲೋಕಸಭಾ ಕ್ಷೇತ್ರದ ವಯನಾಡದ ಕಲ್ಪೆಟ್ಟದಲ್ಲಿ ಗುರುವಾರ ಯುಡಿಎಫ್ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದರು
ಕೇಂದ್ರದ ಬಿಜೆಪಿ ಸರ್ಕಾರ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಸಂಸ್ಥೆಗಳನ್ನು ವಿರೋಧ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳ ವಿರುದ್ಧ ಬಳಸುತ್ತಿದೆ. ಆದರೆ ಎಡಪಂಥೀಯ ಕೇರಳದ ಮೇಲೆ ಅಂತಹ ಯಾವುದೇ ಒತ್ತಡ ಹೇರಲು ಸಾಧ್ಯವಾಗಿಲ್ಲ, ಎಂದು ಹೇಳಿದ್ದಾರೆ.