ಕಾರಿನಲ್ಲಿ ಬೆಂಗಳೂರು ಮೂಲದ ವ್ಯಕ್ತಿಯ ಮೃತದೇಹ ಪತ್ತೆ! | Janata news
ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ಕಾರಿನಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.
ಬೆಂಗಳೂರು ಮೂಲದ ನಿಸ್ಸಾರ್ ಅಹಮದ್ (40) ಮೃತ ದುರ್ದೈವಿಯಾಗಿದ್ದು, ಕುತ್ತಿಗೆ, ತಲೆ, ಎದೆಗೆ ಚಾಕುವಿನಿಂದ ಚುಚ್ಚಿರುವ ಗುರುತುಗಳು ಕಂಡು ಬಂದಿವೆ ಎನ್ನಲಾಗಿದೆ. ಕಾರಿನ ಡ್ರೈವಿಂಗ್ ಸೀಟಿನಲ್ಲೇ ಮೃತನ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
English summary :Tumkur